SHIVAMOGGA LIVE NEWS | 9 DECEMBER 2022
ಶಿವಮೊಗ್ಗ : ಗುಜರಾತ್ ಚುನಾವಣೆಯಲ್ಲಿ (gujarat election results) ಬಿಜೆಪಿ 8ನೇ ಬಾರಿಗೆ ಗೆಲುವು ಸಾಧಿಸಿದ ಹಿನ್ನಲೆ ಜಿಲ್ಲಾ ಬಿಜೆಪಿ ಕಛೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದರು.
ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪಕ್ಷದ ಪರ, ಪ್ರಧಾನ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಪರವಾಗಿ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಎಸ್.ದತ್ತಾತ್ರಿ, ಗುಜರಾತ್ ಗೆಲುವು ದೇಶದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ನೈತಿಕ ಬಲ ಬಂದಿದೆ. ಕರ್ನಾಟಕದಲ್ಲಿ ಇದೇ ರೀತಿ ಜಯಭೇರಿ ಭಾರಿಸಲಿದ್ದೇವೆ ಎಂದರು.
ಬಿಜೆಪಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ (gujarat election results) 150ಕ್ಕೂ ಹೆಚ್ಚು ಸ್ಥಾನ ಗಳಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಗರಿಗೆದರಿದೆ. ಪ್ರಧಾನಿ ಮೋದಿಯವರು ಕೇವಲ ಒಂದು ವರ್ಗಕ್ಕೆ ಯೋಚಿಸದೆ ಇಡೀ ದೇಶದ ಎಲ್ಲಾ ವರ್ಗಕ್ಕೂ ಸೌಲಭ್ಯ ಕಲ್ಪಿಸಿದ್ದಾರೆ ಎಂದರು.
ಇದನ್ನೂ ಓದಿ – ಕ್ಷೇತ್ರ ಪರಿಚಯ | ಶಿವಮೊಗ್ಗ ಕ್ಷೇತ್ರ, ಜಾತಿ ಲೆಕ್ಕಾಚಾರ ತಲೆ ಕೆಳಗಾಗಿಸಿದ ಕ್ಷೇತ್ರ, ಹಿನ್ನೆಲೆ ಏನು?
ಈ ಸಂದರ್ಭ ಪ್ರಮುಖರಾದ ಚನ್ನಬಸಪ್ಪ, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಸುನಿತಾ ಅಣ್ಣಪ್ಪ, ಸುರೇಖಾ ಮುರುಳೀಧರ್, ಜ್ಞಾನೇಶ್ವರ್, ಈ.ವಿಶ್ವಾಸ್, ಪ್ರಭು, ಅಣ್ಣಪ್ಪ, ಅಲ್ಲಾಭಕ್ಷ್, ವಿನ್ಸೆಂಟ್ ಡಿಸೋಜಾ, ರತ್ನಾಕರ್ ಶೆಣೈ, ಜಿಲ್ಲಾ ಯುವ ಮೋರ್ಛಾ ಅಧ್ಯಕ್ಷ ಹರಿಕೃಷ್ಣ ಮತ್ತಿತರರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200