Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್‌ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್‌ 10 ಸುದ್ದಿಗಳು

ಶಿವಮೊಗ್ಗದಲ್ಲಿ ಮಳೆ, ಶಾಲೆಗಳಿಗೆ ರಜೆ, ಜೈಲ್‌ ಗೋಡೆ ಕುಸಿತ, ಜಮೀನು ಜಲಾವೃತ | ಟಾಪ್‌ 10 ಸುದ್ದಿಗಳು

24/07/2023 9:32 AM
ನಿತಿನ್‌ ಕೈದೊಟ್ಲು

SHIVAMOGGA LIVE | 24 JULY 2023

SHIMOGA : ಜಿಲ್ಲೆಯಾದ್ಯಂತ ಭಾನುವಾರ ಭಾರಿ ಮಳೆಯಾಗಿದೆ. ಹಳ್ಳ, ಕೊಳ್ಳಗಳು ಭರ್ತಿಯಾಗಿದ್ದು, ಜಲಾಶಯಗಳಿಗೆ ಹೇರಳವಾಗಿ ನೀರು ಹರಿದು ಬಂದಿದೆ. ಇದರ ಜೊತೆಗೆ ಅಲ್ಲಲ್ಲಿ ಮಳೆಯಿಂದಾಗಿ ಹಾನಿಯು ಸಂಭವಿಸಿದೆ. ಜಿಲ್ಲೆಯಾದ್ಯಂತ ಹೇಗಿತ್ತು ಮಳೆ? ಇಲ್ಲಿದೆ ಕಂಪ್ಲೀಟ್‌ ವಿವರ

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

Rain-havoc-in-Shimoga-district-fatafat-news

ಹೇಗಿತ್ತು ಮಳೆ? ಏನೆಲ್ಲ ಹಾನಿಯಾಯ್ತು?

ಜೈಲಿನ ಕಾಂಪೌಂಡ್‌ ಗೋಡೆ ಕುಸಿತ

Jail Compound in Sagara

ಸಾಗರ : ನಿರಂತರ ಮಳೆಯಿಂದಾಗಿ ಎಸ್‌ಆರ್‌ಎಸ್‌ ಮಿಲ್‌ ರಸ್ತೆಯಲ್ಲಿರುವ FATAFAT NEWS 1 jpgಜೈಲಿನ ಗೋಡೆ ಕುಸಿದಿದೆ. ಭಾನುವಾರ ಬೆಳಗ್ಗೆ ಮತ್ತು ಸಂಜೆ ಎರಡು ಬಾರಿ ಗೋಡೆ ಕುಸಿತ ಕಂಡಿದ್ದು, ಜೈಲು ಅಧೀಕ್ಷಕಿ ಡಾ. ಅನಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜೈಲು ಗೋಡೆ ಕುಸಿತದಿಂದ ಕೈದಿಗಳ ನಿರ್ವಹಣೆಗೆ ಯಾವುದೆ ತೊಂದರೆಯಾಗಿಲ್ಲ. ಸದ್ಯ ಜೈಲಿನಲ್ಲಿ 25 ಕೈದಿಗಳಿದ್ದಾರೆ. ಅವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. 15 ಅಡಿ ಎತ್ತರದ ಗೋಡೆ ಇದಾಗಿದೆ.

FATAFAT-MORE-NEWS

ತುಂಬಿ ಹರಿಯುತ್ತಿರುವ ವರದಾ, ದಂಡಾವತಿ

ಸೊರಬ : ನಿರಂತರ ಮತ್ತು ಜೋರು ಮಳೆಯಿಂದಾಗಿ ಸೊರಬ ತಾಲೂಕಿನ FATAFAT NEWS 2 jpgವರದಾ ಮತ್ತು ದಂಡಾವತಿ ನದಿಗಳು ತುಂಬಿ ಹರಿಯುತ್ತಿವೆ. ನದಿ ಪಾತ್ರ ಜಮೀನುಗಳಿಗೆ ಜಲಾವೃತವಾಗಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

FATAFAT-MORE-NEWS

ಬಸವನಹೊಳೆ ಡ್ಯಾಂ ಭರ್ತಿ

basavanahole dam in Sagara

ಸಾಗರ : ನಗರದಲ್ಲಿರುವ ಬಸವನಹೊಳೆ ಡ್ಯಾಂ ಭರ್ತಿಯಾಗಿದೆ. ಈ ಹಿನ್ನೆಲೆ FATAFAT NEWS 3 jpgಗೇಟ್‌ಗಳನ್ನು ತೆಗೆದು ನೀರು ಹೊರಗೆ ಬಿಡಲಾಗಿದೆ. ಈ ಹಿಂದೆ ಬಸವನಹೊಳೆ ಡ್ಯಾಂ ಮೂಲಕ ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು.

FATAFAT-MORE-NEWS

ಮದರಸಾ ಗೋಡೆ, ಛಾವಣಿ ಕುಸಿತ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮದಲ್ಲಿರುವ ಮದರಸಾದ ಗೋಡೆ ಮತ್ತು FATAFAT NEWS 4 jpgಛಾವಣಿ ಕುಸಿದಿದೆ. ಅದೃಷ್ಟವಶಾತ್‌ ಯಾರಿಗೂ ಸಮಸ್ಯೆಯಾಗಿಲ್ಲ. ಭಾನುವಾರವಾದ್ದರಿಂದ ಮದರಸಾಗೆ ರಜೆ ಇತ್ತು. ಹಾಗಾಗಿ ಮಕ್ಕಳು ಬಂದಿರಲಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

FATAFAT-MORE-NEWS

ನೆರೆ ಪರಿಸ್ಥಿತಿ, ಜಮೀನುಗಳಲ್ಲಿ ನಿಂತ ನೀರು

Saiduru Bridge in Sagara Taluk

ಸಾಗರ : ನಿರಂತರ ಜೋರು ಮಳೆಯಿಂದಾಗಿ ಬೀಸನಗದ್ದೆ, ಸೈದೂರು FATAFAT NEWS 5 jpgಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಸನಗದ್ದೆ, ಸೈದೂರು, ಮಂಡಗಳಲೆ, ಕಣಸೆ, ತಟ್ಟೆಗುಂಡಿ ಸುತ್ತಮುತ್ತ ಭಾರಿ ಮಳೆಯಾಗಿದೆ. ಜಮೀನಿನಲ್ಲಿ ನೀರು ನಿಂತಿದ್ದು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸೈದೂರು ಸೇತುವೆ ಮೇಲೆ ನೀರು ಹರಿಯುವ ಸಾದ್ಯತೆ ಇದ್ದು ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕವಿದೆ.

FATAFAT-MORE-NEWS

ಶಾಲೆಗಳಿಗೆ ರಜೆ ಘೋಷಣೆ

Maxx-Hospital-lady-Staff-walking-holding-umbrella-in-Rain

ಶಿವಮೊಗ್ಗ : ಭಾರಿ ಮಳೆ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ FATAFAT NEWS 6 jpgಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ರಜೆ ಘೋಷಿಸಿದ್ದಾರೆ. ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಜು.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಸರಿದೂಗಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಪರಿಸ್ಥಿತಿ ಅನುಗುಣವಾಗಿ ರಜೆ ನೀಡಲು ಆಯಾ ಕಾಲೇಜು ಪ್ರಾಂಶುಪಾಲರಿಗೆ ಅವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈಗಾಗಲೆ ಭದ್ರಾವತಿ, ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರದ ಕೆಲ ಕಾಲೇಜುಗಳಲ್ಲಿ ಪ್ರಾಂಶುಪಾಲರು ರಜೆ ಘೋಷಿಸಿದ್ದಾರೆ.

FATAFAT-MORE-NEWS

ವೀಕೆಂಡ್‌ನಲ್ಲಿ ಪ್ರವಾಸಿಗರ ದಂಡು

Jog-Falls-during-Monsoon-with-mist-covered.

ಸಾಗರ : ವೀಕೆಂಡ್‌ ಹೊತ್ತಲ್ಲೆ ಜೋರು ಮಳೆಯಾಗಿದೆ. ರಾಜ್ಯ, ಹೊರ FATAFAT NEWS 7 jpgರಾಜ್ಯದ ವಿವಿಧೆಡೆಯ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಜೋಗ ಜಲಪಾತ ಕಣ್ತುಂಬಿಕೊಳ್ಳಲು ಭಾನುವಾರ ಬೆಳಗ್ಗೆಯಿಂದಲೆ ಪ್ರವಾಸಿಗರು ಆಗಮಿಸಿದ್ದರು. ಮಳೆ ಮತ್ತು ನೂಕುನುಗ್ಗಲಿನಲ್ಲಿ ಜಲಪಾತ ವೀಕ್ಷಿಸಿದರು. ಸಿಗಂದೂರು, ವರದಪುರ ಸೇರಿದಂತೆ ಸಾಗರ ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ರಶ್‌ ಕಂಡು ಬಂತು.

PARISHRAMA NEET Academy

FATAFAT-MORE-NEWS

ತತ್ತೂರು, ಕುಪ್ಪಗಡ್ಡೆಯಲ್ಲಿ ಮನೆಗಳಿಗೆ ಹಾನಿ

ಸೊರಬ : ಭಾರಿ ಮಳೆಯಿಂದಾಗಿ ಸೊರಬ ತಾಲೂಕು ತತ್ತೂರು ಮತ್ತು FATAFAT NEWS 8 jpgಕುಪ್ಪಗಡ್ಡೆ ಗ್ರಾಮಗಳಲ್ಲಿ ಮನೆಗಳು ಕುಸಿದಿವೆ. ಕುಪ್ಪಗಡ್ಡೆ ಗ್ರಾಮದ ಈಶ್ವರಪ್ಪ ಮತ್ತು ತತ್ತೂರು ವಡ್ಡಗೇರಿಯ ವಿರೂಪಾಕ್ಷಪ್ಪ ಅವರ ಮನೆಗಳಿಗೆ ಹಾನಿಯಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಕುರಿತು ಪರಿಶೀಲಿಸಿದರು.

FATAFAT-MORE-NEWS

ರಸ್ತೆ ಗುಂಡಿಗಳಲ್ಲಿ ಮಳೆ ನೀರು

ಹೊಳೆಹೊನ್ನೂರು : ಭಾರಿ ಮಳೆಯಿಂದಾಗಿ ಹೊಳೆಹೊನ್ನೂರು FATAFAT NEWS 9 jpgರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ನೃಪತುಂಗ ವೃತ್ತ, ಮಹಾತ್ಮ ಗಾಂಧಿ ವೃತ್ತ, ಭಗೀರಥ ವೃತ್ತದಲ್ಲಿ ದೊಡ್ಡ ಗುಂಡಿಗಳಾಗಿವೆ. ಪಟ್ಟಣದ ಪ್ರಮುಖ ಕಡೆಗಳಲ್ಲಿಯು ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಾಯ್ತೆರೆದಿವೆ. ಮಳೆಯಿಂದಾಗಿ ಗುಂಡಿಗಳಲ್ಲಿ ನೀರು ನಿಂತಿದ್ದು, ಚಾಲಕರು ವಾಹನ ಚಲಾಯಿಸಲು ಕಷ್ಟಪಡುವಂತಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಪಿಯು ಕಾಲೇಜುಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ರಜೆ, ಪ್ರಾಂಶುಪಾಲರ ನಿರ್ಧಾರವೆ ಫೈನಲ್

FATAFAT-MORE-NEWS

ಬಂದಗದ್ದೆ ಕೆರೆ ದಂಡೆ ಕುಸಿತ

Bandagadde in Sagara Taluk

ಸಾಗರ : ಕೆಳದಿ ಸಮೀಪದ ಬಂದಗದ್ದೆ ಕೆರೆ ದಂಡೆ ಕುಸಿದಿದೆ. ಇದರಿಂದ FATAFAT NEWS 10 jpgರೈತರು ಆತಂಕಕ್ಕೀಡಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಾತ್ಕಾಲಿಕ ದುರಸ್ಥಿ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅದರಂತೆ ದುರಸ್ಥಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಕಳೆದ ವರ್ಷವಷ್ಟೆ ದಂಡೆ ದುರಸ್ತಿ ನಡೆದಿತ್ತು. ಆದರೆ ಈ ಬಾರಿ ಮಳೆಗೆ ದಂಡೆಯಲ್ಲಿ ಕುಸಿತ ಕಂಡಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Maxx-Hospital-lady-Staff-walking-holding-umbrella-in-Rain ಶಿವಮೊಗ್ಗ ಜಿಲ್ಲೆಯ ಪಿಯು ಕಾಲೇಜುಗಳಿಗೆ ಪರಿಸ್ಥಿತಿಗೆ ಅನುಗುಣವಾಗಿ ರಜೆ, ಪ್ರಾಂಶುಪಾಲರ ನಿರ್ಧಾರವೆ ಫೈನಲ್
Next Article Lokayuktha-Raid-on-Shirasthedar-arun-kumar BREAKING NEWS | ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿ

ಇದನ್ನೂ ಓದಿ

Lokayukta-raid-gold-found-at-Professors-house.
SHIVAMOGGA CITY

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 24 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Shimoga-News-update
FATAFAT NEWS

ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Agriculture-News-Farmer
FATAFAT NEWS

ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ ತೋಟಗಾರಿಕೆ ಇಲಾಖೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?