‘ಸಚಿವ ಈಶ್ವರಪ್ಪ ಅವರನ್ನು ಗಾಂಜಾ ಪೆಡ್ಲರ್ ಎಂದು ಹೇಳಲು ಆಗುತ್ತದೆಯೇ?’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾಂಗ್ರೆಸ್ ನಾಯಕರನ್ನು ಡ್ರಗ್ ಪೆಡ್ಲರ್, ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಎಂದು ಟೀಕಿಸಲಾಗುತ್ತಿದೆ. ಆದರೆ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಾಗಂತ ಅವರನ್ನು ಗಾಂಜಾ ಪೆಡ್ಲರ್ ಎಂದು ಕರೆಯಲು ಆಗುತ್ತದೆಯೇ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದೆ. ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಆರೋಪಿಸಿರು.

ಕಳೆದ ವಿಧಾನ ಸಭೆ ಚುನಾವಣೆಯ ನಂತರ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಮಿತಿ ಮೀರಿವೆ. ಇದರ ಬಗ್ಗೆ ಗೊತ್ತಿದ್ದರೂ ಕೂಡ ಸ್ಥಳೀಯ ಶಾಸಕರಾದ ಈಶ್ವರಪ್ಪ ಯಾವುದೇ ಗಟ್ಟಿ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

LifeSpring%2BKan%2B02

ಸ್ಮಾರ್ಟ್ ಸಿಟಿ ಲೂಟಿ

ಸರ್ಕಾರದ ಯಾವುದೇ ಕಚೇರಿಗಳಲ್ಲಿಯೂ ಕೆಲಸಗಳು ಆಗುತ್ತಿಲ್ಲ. ಜನಸಾಮಾನ್ಯ ದಿನನಿತ್ಯ ಅಲೆಯುವಂತಾಗಿದೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಲೂಟಿ ನಡೆಯುತ್ತಿದೆ. ಕಾಲಮಿತಿಯಲ್ಲಿ ಮುಗಿಯಬೇಕಾದ ಕೆಲಸಗಳು ಮುಗಿಯುತ್ತಿಲ್ಲ. ಚೆನ್ನಾಗಿರುವ ಡೆಕ್ ಸ್ಲ್ಯಾಬ್‌ಗಳನ್ನು ಒಡೆದು ಕಳಪೆ ಕಾಮಗಾರಿ ಮಾಡಲಾಗುತ್ತಿದೆ. ಇದರಿಂದಾಗಿ ಇಡೀ ನಗರದ ಜನ ಮಾತ್ರವಲ್ಲ ಹೊರಗಿನಿಂದ ಬರುವವರೂ ಕೂಡ ಪರಿತಪಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದರು.

SHIVAMOGGA LIVE CONTATCT

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಬೊಮ್ಮನಕಟ್ಟೆ ಮಂಜುನಾಥ, ಎನ್.ಕೆ. ಶಾಮಸುಂದರ್, ಆರ್.ಕೆ. ಉಮೇಶ್, ದೀಪಕ್ ಸಿಂಗ್, ಶಾಮೀರ್ ಖಾನ್ ಇದ್ದರು.

1632381449326627 1

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment