Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮೈಸೂರು – ತಾಳಗುಪ್ಪ ರೈಲಿಗೆ ಪೂಜೆ, ಇಂಜಿನ್‌ ಹತ್ತಿ ಸ್ಥಳೀಯರಿಂದ ಘೋಷಣೆ, ಸಂಭ್ರಮಾಚರಣೆ

ಮೈಸೂರು – ತಾಳಗುಪ್ಪ ರೈಲಿಗೆ ಪೂಜೆ, ಇಂಜಿನ್‌ ಹತ್ತಿ ಸ್ಥಳೀಯರಿಂದ ಘೋಷಣೆ, ಸಂಭ್ರಮಾಚರಣೆ

25/08/2023 8:05 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 24 AUGUST 2023

RIPPONPETE : ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಮೊದಲ ದಿನ ಎಕ್ಸ್‌ಪ್ರೆಸ್‌ ರೈಲುಗಳು (Trains) ನಿಲುಗಡೆ ನೀಡಿವೆ. ಸ್ಥಳೀಯರು ರೈಲುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ಮಾಡಿದರು. ಇವೆರಡು ನಿಲ್ದಾಣಗಳಲ್ಲಿ ಎರಡು ಎಕ್ಸ್‌ಪ್ರೆಸ್‌ ರೈಲುಗಳು ನಿಲುಗಡೆಗೆ ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ರೈಲಿಗೆ ಪೂಜೆ, ಇಂಜಿನ್‌ ಹತ್ತಿ ಘೋಷಣೆ

ಅರಸಾಳು ನಿಲ್ದಾಣಕ್ಕೆ ರೈಲು ಆಗಮಿಸುತ್ತಿದ್ದಂತೆ ಸ್ಥಳೀಯರು ಇಂಜಿನ್‌ಗೆ (Engine) ಹೂವು ಮುಡಿಸಿ, ಬಾಳೆ ಕಂದು ಕಟ್ಟಿ, ಪೂಜೆ ಸಲ್ಲಿಸಿದರು. ಇಂಜಿನ್‌ ಮೇಲೆ ಹತ್ತಿ ನಿಂತು ರೈಲ್ವೆ ಇಲಾಖೆ, ಸಂಸದ ಬಿ.ವೈ.ರಾಘವೇಂದ್ರ ಪರವಾಗಿ ಘೋಷಣೆ ಕೂಗಿದರು. ರೈಲಿನ ಮುಂದೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.

ಐತಿಹಾಸ ನಿರ್ಧಾರ ಎಂದು ಖುಷಿ

ಅರಸಾಳು (Arasalu) ನಿಲ್ದಾಣದಲ್ಲಿ ರೈಲುಗಳ (Stations) ನಿಲುಗಡೆಗೆ ಒತ್ತಾಯಿಸಿ ಸ್ಥಳೀಯರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಈ ಭಾಗದ ಜನರು ರೈಲು ಹತ್ತಲು ಆನಂದಪುರ ಅಥವಾ ಶಿವಮೊಗ್ಗಕ್ಕೆ ತೆರಳಬೇಕಿತ್ತು. ನಿಲ್ದಾಣವಿದ್ದರು ರೈಲುಗಳು ನಿಲ್ಲಿಸದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ರೈಲುಗಳು ನಿಲುಗಡೆಗೆ ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ. ತೀರ್ಥಹಳ್ಳಿ, ಕೋಣಂದೂರು, ಹೊಸನಗರ ತಾಲೂಕಿನ ವಿವಿಧೆಡೆಯ ಜನರು ಅರಸಾಳು ನಿಲ್ದಾಣಕ್ಕೆ ಬಂದು ರೈಲು ಹತ್ತಬಹುದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Railway-Stoppage-at-Arasalu-Station-and-locals-celebrate

ಪ್ರವಾಸಿ ತಾಣಗಳಿಗೆ ಹೋಗಲು ಅನುಕೂಲ

ಅರಸಾಳು ಗ್ರಾಮದಲ್ಲಿ ರೈಲು ನಿಲುಗಡೆ ನೀಡಿದರೆ ಪ್ರವಾಸಿ ತಾಣಗಳಿಗೆ ತೆರಳುವುದಕ್ಕೆ ಅನುಕೂಲವಾಗಲಿದೆ. ಅರಸಾಳು ನಿಲ್ದಾಣ ಮಾಲ್ಗುಡಿ ನಿಲ್ದಾಣವಾಗಿ ಪರಿವರ್ತನೆಯಾಗಿದೆ. ಇದೆ ಪ್ರವಾಸಿ ತಾಣವಾಗಿದೆ. ಇನ್ನು, ಕೊಲ್ಲೂರು, ಹುಂಚ, ಸಿಗಂದೂರು ಸೇರಿದಂತೆ ವಿವಿಧ ಪ್ರವಾಸಿ ತಾಣಕ್ಕೆ ತೆರಳುವವರಿಗೆ ಈ ನಿಲ್ದಾಣದಿಂದ ಅನುಕೂಲವಾಗಲಿದೆ ಎಂದು ಜನರು ಖುಷಿಪಟ್ಟರು.

ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್‌ ರೈಲು? ಸಂಸದ ರಾಘವೇಂದ್ರ ಮೀಟಿಂಗ್‌, ಏನೇನು ಚರ್ಚೆಯಾಯ್ತು?

ಕುಂಸಿಯಲ್ಲಿ ಸಿಹಿ ಹಂಚಿ ಖುಷಿ

ಕುಂಸಿ ನಿಲ್ದಾಣದಲ್ಲಿ ತಾಳಗುಪ್ಪ – ಮೈಸೂರು ರೈಲು ನಿಲುಗಡೆ ನೀಡುತ್ತಿದ್ದಂತೆ ಸ್ಥಳೀಯರು ಖುಷಿಯಿಂದ ರೈಲಿಗೆ ಬಾಳೆ ಕಂದು ಕಟ್ಟಿ, ಹೂವು ಹಾಕಿದರು. ರೈಲ್ವೆ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಸಿಹಿ ಹಂಚಿದರು. ರೈಲು ನಿಲುಗಡೆಗೆ ಸಂತೋಷ ವ್ಯಕ್ತಪಡಿಸಿದರು. ಅಲ್ಲದೆ ಮುಂದೆ ತಾಳಗುಪ್ಪ ಬೆಂಗಳೂರು ರೈಲು ನಿಲುಗಡೆ ಮಾಡಬೇಕು. ಅದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಯಾವ್ಯಾವ ರೈಲು, ಎಷ್ಟೊತ್ತು ನಿಲ್ಲುತ್ತೆ?

  • ಮೈಸೂರು ತಾಳಗುಪ್ಪ ರೈಲು (ರೈಲು ಸಂಖ್ಯೆ 16227) – ಅರಸಾಳು ನಿಲ್ದಾಣಕ್ಕೆ ಬೆಳಿಗ್ಗೆ 5:43ಕ್ಕೆ ಆಗಮಿಸಿ 5:44 ಗಂಟೆಗೆ ನಿರ್ಗಮಿಸಲಿದೆ.
  • ತಾಳಗುಪ್ಪ ಮೈಸೂರು ರೈಲು (16228) ಅರಸಾಳು ನಿಲ್ದಾಣಕ್ಕೆ ರಾತ್ರಿ 10:03ಕ್ಕೆ ಆಗಮಿಸಿ 10:04ಕ್ಕೆ ನಿರ್ಗಮಿಸಲಿದೆ

  • ಮೈಸೂರು ತಾಳಗುಪ್ಪ ರೈಲು (16206) – ಕುಂಸಿ ನಿಲ್ದಾಣಕ್ಕೆ ಬೆಳಿಗ್ಗೆ 11:25ಕ್ಕೆ ಆಗಮಿಸಿ 11:26ಕ್ಕೆ ನಿರ್ಗಮಿಸಲಿದೆ. ಅರಸಾಳು ನಿಲ್ದಾಣಕ್ಕೆ 11:40ಕ್ಕೆ ಆಗಮಿಸಿ 11:41ಕ್ಕೆ ನಿರ್ಗಮಿಸಲಿದೆ.
  • ತಾಳಗುಪ್ಪ ಮೈಸೂರು ರೈಲು (16205) – ಅರಸಾಳು ನಿಲ್ದಾಣಕ್ಕೆ ಸಂಜೆ 4 ಗಂಟೆ ಆಗಮಿಸಿ, 4:01ಕ್ಕೆ ನಿರ್ಗಮಿಸಲಿದೆ. ಕುಂಸಿ ನಿಲ್ದಾಣಕ್ಕೆ ಸಂಜೆ 4:15ಕ್ಕೆ ತಲುಪಿ 4:16ಕ್ಕೆ ನಿರ್ಗಮಿಸಲಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shivamogga Live Today News ಶಿವಮೊಗ್ಗದ TOP 10 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ
Next Article 250823 KSRTC Bike at Kutruvalli in Shikaripura ಬಸ್‌-ಬೈಕ್‌ ಡಿಕ್ಕಿ, ಯುವಕ ಸ್ಥಳದಲ್ಲೆ ಸಾವು, ಹುಟ್ಟುಹಬ್ಬದ ಮರುದಿನವೆ ವಿಧಿಯ ಕರಾಳ ಆಟ

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?