SHIVAMOGGA LIVE NEWS | 17 APRIL 2024
SAGARA : ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ನಾಯಕ ಹಕ್ರೆ ಮಲ್ಲಿಕಾರ್ಜುನ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಗುರುವಾರ ಶಿವಮೊಗ್ಗದಲ್ಲಿ ಬಿಜೆಪಿ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ.
ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಕ್ರೆ ಮಲ್ಲಿಕಾರ್ಜುನ, ‘ಕಾಂಗ್ರೆಸ್ ಪಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ನಡೆಯಿಂದ ಬೇಸತ್ತು ಪಕ್ಷ ತೊರೆಯುತ್ತಿದ್ದೇನೆ. ಶಾಸಕರು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಲು ಹೋಗಲು ವಿಫಲವಾಗಿದ್ದಾರೆ. ಸದ್ಯ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ, ರಾಘವೇಂದ್ರ ಅವರ ನಾಯಕತ್ವದ ಅಗತ್ಯವಿದೆ. ಈ ಹಿನ್ನೆಲೆ ಗುರುವಾರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಶಿವಮೊಗ್ಗದಲ್ಲಿ ಬಿಜೆಪಿ ಸೇರ್ಪಡೆಯಾಗುತ್ತೇನೆʼ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಜಾವಳ್ಳಿಯಲ್ಲಿ ಯುವತಿಯನ್ನು ಕಾಡಿಗೆ ಎಳೆದೊಯ್ದ ಯುವಕರು, ಸ್ನೇಹಿತನ ಮೇಲೆ ಹಲ್ಲೆ, ರಾಬರಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200