SHIVAMOGGA LIVE NEWS |4 JANUARY 2023
HOSANGARA : ಪ್ರಸನ್ನ ಭಟ್ ಅವರ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ಭೇಟಿ (visit) ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಪ್ರಸನ್ನ ಭಟ್ ಅವರ ತಾಯಿಯೊಂದಿಗೆ ಕೆಲ ಹೊತ್ತು ಮಾತನಾಡಿದ ರಾಘವೇಂದ್ರ ಅವರು ಭಾವುಕರಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಪ್ರಸನ್ನ ಭಟ್ ತಮ್ಮೊಂದಿಗಿದ್ದು ಫೋಟೊಗಳು, ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದರು. ಸಂಘಟನೆಯ ಕೆಲಸದಲ್ಲಿಯು ತೊಡಗಿಸಿಕೊಂಡಿದ್ದರು. ಅವರ ಅಕಾಲಿಕ ನಿಧನ ನೋವುಂಟು ಮಾಡಿದೆ ಎಂದರು.
ಇದನ್ನೂ ಓದಿ – ಪ್ರಸನ್ನ ಭಟ್ ಅಂತಿಮ ದರ್ಶನಕ್ಕೆ ಶಿವಮೊಗ್ಗ, ಹೊಸನಗರದಲ್ಲಿ ದೊಡ್ಡ ಸಂಖ್ಯೆಯ ಜನ, ಮುಖ್ಯ ರಸ್ತೆಯಲ್ಲಿ ಮೆರವಣಿಗೆ
ಇನ್ನು, ಪ್ರಸನ್ನ ಭಟ್ ಸ್ಮರಣಾರ್ಥ ವಿದ್ಯಾರ್ಥಿಗಳು, ಯುವಕರಿಗೆ ಅನುಕೂಲ ಆಗುವ ಕಾರ್ಯವೊಂದನ್ನು ಹೊಸನಗರದಲ್ಲಿ ಮಾಡಲಾಗುತ್ತದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200