‘ಎಲ್ಲೆಡೆಯೂ ನನಗೇ ಹೆಚ್ಚು ಮತ, 300ಕ್ಕಿಂತಲೂ ಅಧಿಕ ಅಂತರದಲ್ಲಿ ಗೆಲುವು’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021

ವಿಧಾನ ಪರಿಷತ್ ಚುನಾವಣೆಯ ಎಲ್ಲಾ ಮತಗಟ್ಟೆಗಳಲ್ಲಿ ತಮಗೆ ಮುನ್ನಡೆ ಲಭಿಸಲಿದೆ. 300ಕ್ಕಿಂತಲೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಪ್ರಸನ್ನ ಕುಮಾರ್, ಶಿಕಾರಿಪುರದಲ್ಲಿ ಸಮಬಲದ ಹೋರಾಟವಿರಲಿದೆ. ಉಳಿದೆಲ್ಲ ಕಡೆಯಲ್ಲೂ ತಮಗೆ ಅತಿ ಹೆಚ್ಚು ಮತಗಳು ಲಭಿಸಲಿವೆ ಎಂದು ತಿಳಿಸಿದರು.

ಗೆಲ್ಲುವ  ವಿಶ್ವಾಸ, ಕೊಟ್ಟ ಕಾರಣಗಳೇನು?

ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲೂ ನನಗೆ ಹೆಚ್ಚಿನ ಮತ ಬಂದಿದೆ. ಶಿಕಾರಿಪುರ ತಾಲೂಕಿನಲ್ಲಿ ಸಮಬಲದ ಹೋರಾಟ ನಡೆಸಿದ್ದೇನೆ. ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ತಾಲೂಕಿನಲ್ಲಿ ಹೆಚ್ಚಿನ ಮತಗಳು ಬಂದಿವೆ.

ಜೆಡಿಎಸ್ ಪಕ್ಷದ ಮತದಾರರು ಕೂಡ ನನಗೆ ಮತ ನೀಡಿದ್ದಾರೆ. ಶೇ.15ರಷ್ಟು ಬಿಜೆಪಿ ಬೆಂಬಲಿತ ಮತದಾರರ ಮತಗಳೂ ನನಗೆ ಬಂದಿವೆ. ಯಾವುದೇ ಮತಗಟ್ಟೆಗಳಲ್ಲಿ ತಮಗೆ ಕಡಿಮೆ ಮತಗಳು ಬಂದಿಲ್ಲ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಮಧುಬಂಗಾರಪ್ಪ, ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ನನ್ನ ಪರ ಕೆಲಸ ಮಾಡಿದವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಸಿ.ಎಸ್.ಚಂದ್ರಭೂಪಾಲ, ಕಲಗೋಡು ರತ್ನಾಕರ್, ಎಸ್.ಪಿ.ದಿನೇಶ್, ಎನ್. ರಮೇಶ್, ಡಾ.ಶ್ರೀನಿವಾಸ್, ಹನುಮಂತು, ಯು.ಶಿವಾನಂದ, ಕೆ.ರಂಗನಾಥ್, ವಿಜಯ ಕುಮಾರ್, ಇಕ್ಕೇರಿ ರಮೇಶ್, ದೀಪಕ್ ಸಿಂಗ್, ಮಧುಸೂದನ್, ಚೇತನ್, ದೇವಿಕುಮಾರ್, ಎಸ್.ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

shivamogga live subscribe New Kannada

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment