| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆಯ ಎಲ್ಲಾ ಮತಗಟ್ಟೆಗಳಲ್ಲಿ ತಮಗೆ ಮುನ್ನಡೆ ಲಭಿಸಲಿದೆ. 300ಕ್ಕಿಂತಲೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಪ್ರಸನ್ನ ಕುಮಾರ್, ಶಿಕಾರಿಪುರದಲ್ಲಿ ಸಮಬಲದ ಹೋರಾಟವಿರಲಿದೆ. ಉಳಿದೆಲ್ಲ ಕಡೆಯಲ್ಲೂ ತಮಗೆ ಅತಿ ಹೆಚ್ಚು ಮತಗಳು ಲಭಿಸಲಿವೆ ಎಂದು ತಿಳಿಸಿದರು.
ಗೆಲ್ಲುವ ವಿಶ್ವಾಸ, ಕೊಟ್ಟ ಕಾರಣಗಳೇನು?
ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲೂ ನನಗೆ ಹೆಚ್ಚಿನ ಮತ ಬಂದಿದೆ. ಶಿಕಾರಿಪುರ ತಾಲೂಕಿನಲ್ಲಿ ಸಮಬಲದ ಹೋರಾಟ ನಡೆಸಿದ್ದೇನೆ. ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ತಾಲೂಕಿನಲ್ಲಿ ಹೆಚ್ಚಿನ ಮತಗಳು ಬಂದಿವೆ.
ಜೆಡಿಎಸ್ ಪಕ್ಷದ ಮತದಾರರು ಕೂಡ ನನಗೆ ಮತ ನೀಡಿದ್ದಾರೆ. ಶೇ.15ರಷ್ಟು ಬಿಜೆಪಿ ಬೆಂಬಲಿತ ಮತದಾರರ ಮತಗಳೂ ನನಗೆ ಬಂದಿವೆ. ಯಾವುದೇ ಮತಗಟ್ಟೆಗಳಲ್ಲಿ ತಮಗೆ ಕಡಿಮೆ ಮತಗಳು ಬಂದಿಲ್ಲ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಮಧುಬಂಗಾರಪ್ಪ, ಕೆ.ಬಿ.ಪ್ರಸನ್ನಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ನನ್ನ ಪರ ಕೆಲಸ ಮಾಡಿದವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಸಿ.ಎಸ್.ಚಂದ್ರಭೂಪಾಲ, ಕಲಗೋಡು ರತ್ನಾಕರ್, ಎಸ್.ಪಿ.ದಿನೇಶ್, ಎನ್. ರಮೇಶ್, ಡಾ.ಶ್ರೀನಿವಾಸ್, ಹನುಮಂತು, ಯು.ಶಿವಾನಂದ, ಕೆ.ರಂಗನಾಥ್, ವಿಜಯ ಕುಮಾರ್, ಇಕ್ಕೇರಿ ರಮೇಶ್, ದೀಪಕ್ ಸಿಂಗ್, ಮಧುಸೂದನ್, ಚೇತನ್, ದೇವಿಕುಮಾರ್, ಎಸ್.ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
![]()
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()