ಬೋರ್‌ವೆಲ್‌ ಕೊರೆಯುವಾಗ ಅಧಿಕಾರಿಗಳ ದಾಳಿ, ಎರಡು ವಾಹನಗಳು ವಶಕ್ಕೆ

SHIVAMOGGA LIVE NEWS | 3 APRIL 2024

ANAVATTI : ಅನಧಿಕೃತವಾಗಿ ಬೋರ್‌ವೆಲ್‌ ಕೊರೆಯುತ್ತಿದ್ದ ಎರಡು ವಾಹನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ವೃತ್ತಿಕೊಪ್ಪ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ.

ಅನುಮತಿ ಪಡೆಯದೆ ಬೋರ್‌ವೆಲ್‌ ಕೊರೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಬೋರ್‌ವೆಲ್‌ ಕೊರೆಯುವ ವಾಹನ ಮತ್ತು ಅದರ ಜೊತೆಗೆ ಮತ್ತೊಂದು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಂತರ್ಜಲ ನಿರ್ದೇಶನಾಲಯದ ಭೂ ವಿಜ್ಞಾನಿ ನಿರ್ಮಲನಾಥನ್‌, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಎನ್‌.ರವೀಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ನಾಗರಾಜ್‌ ಅನ್ವೇಕರ್‌ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ – ಸೊರಬದಲ್ಲಿ ರಂಭಾಪುರಿ ಶ್ರೀ, ಆಂತರಿಕ ಬದುಕು ಪರಿಶುದ್ಧಿ ಕುರಿತು ಸಂದೇಶ, ಏನದು?

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment