ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 4 ಸೆಪ್ಟೆಂಬರ್ 2021
ಅಡುಗೆ ಅನಿಲ ಸಿಲಿಂಡರ್ ಬಲೆ, ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳ ವಿರೋಧಿಸಿ ಶಿವಮೊಗ್ಗದಲ್ಲಿ ನಡುರಸ್ತೆಯಲ್ಲೇ ಒಲೆ ಹಚ್ಚಿ, ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.
ಒಲೆ ಹಚ್ಚಿ ಅಡುಗೆ
ಸರ್ಕಲ್ ಮಧ್ಯದಲ್ಲೇ ಸೌದೆ ಒಲೆ ನಿರ್ಮಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಅಡುಗೆ ಮಾಡುವಂತೆ ಅಣಕು ಪ್ರದರ್ಶನ ಮಾಡಿದರು. ಇದೇ ವೇಳೆ ಕೇಂದ್ರ ಸರ್ಕಾರ ದಿನೇ ದಿನೇ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಆಕ್ರೋಶ ವ್ಯಕ್ತಪಿಸಿದರು.
ಸರ್ಕಾರವನ್ನು ವಜಾಗೊಳಿಸಬೇಕು
ಪ್ರತಿಭಟನೆಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ದಿನೇ ದಿನೇ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ. ಭಾರತೀಯರು ಬದುಕಲು ಕಷ್ಟಪಡುವಂತಹ ಸ್ಥಿತಿ ಇದೆ. ರಾಷ್ಟ್ರಪತಿಗಳು ಕೇಂದ್ರ ಸರ್ಕಾರವನ್ನು ವಜಾಗೊಲಿಸಬೇಕು ಎಂದು ಆಗ್ರಹಿಸಿದರು.
ಮೋದಿ ಫೋಟೊಗೆ ಬೆಂಕಿ
ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಫೋಟೊಗೆ ಬೆಂಕಿ ಹಚ್ಚಿದರು. ಕೇಂದ್ರ ಸರ್ಕಾರ ಕೂಡಲೆ ತೈಲೋತ್ಪನ್ನಗಳ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ಇನ್ನು, ರಸ್ತೆಯಲ್ಲಿ ಬೆಂಕಿ ಹಚ್ಚಿದ್ದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















