ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟಂಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಬಿಜೆಪಿ ಸರ್ಕಾರ ನಡೆ ಖಂಡಿಸಿ, ಉರುಳು ಸೇವೆ ಮಾಡಿದರು.
ಬಿ.ಹೆಚ್.ರಸ್ತೆಯಲ್ಲಿ ಉರುಳು ಸೇವೆ ಮಾಡಿ, ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು. ಯುವ ಕಾಂಗ್ರೆಸ್ ನಗರಾಧ್ಯಕ್ಷ ಗಿರೀಶ್, ಅಶೋಕ ಸರ್ಕಲ್ ಬಳಿಯಿಂದ ಬಿ.ಹೆಚ್.ರಸ್ತೆಯಲ್ಲಿ ಉರುಳು ಸೇವೆ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕ, ಜನ ವಿರೋಧಿಯಾಗಿದ್ದು, ಇದನ್ನು ಖಂಡಿಸಿ ಉರುಳು ಸೇವೆ ಮಾಡಿದ್ದಾಗಿ ಗಿರೀಶ್ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]