SHIVAMOGGA LIVE NEWS
ಶಿವಮೊಗ್ಗ | ವೀರಶೈವ -ಲಿಂಗಾಯತ (VEERASHAIVA LINGAYATH) ಸಮುದಾಯದ ಎಲ್ಲಾ ಪಂಗಡಗಳನ್ನು ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ (3ಬಿ) ಸೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಮೆರವಣಿಗೆ ನಡೆಸಲಾಯಿತು.
ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ಇತರೆ ಹಿಂದುಳಿದ ವರ್ಗಗಳಿಗೆ ಒಬಿಸಿ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ 60 ವರ್ಷಗಳಿಂದ ಲಿಂಗಾಯತ ಸಮುದಾಯ ಹಿಂದುಳಿದ ಪಟ್ಟಿಯಲ್ಲಿದ್ದರೂ ಕೇಂದ್ರ ಸರ್ಕಾರ ಮಾತ್ರ ಒಬಿಸಿ ಪಟ್ಟಿಗೆ ಸೇರಿಸದೇ ಇರುವುದು ದುರಾದೃಷ್ಟಕರ. ಈಗಾಗಲೇ ಹಿಂದುಳಿದ ಪಟ್ಟಿಗೆ ಸೇರಿರುವ ಇತರೆ ಸಮುದಾಯಗಳಿಗಿಂತ ನಮ್ಮ ಸಮುದಾಯ ಹಿಂದುಳಿದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವೀರಶೈವ (VEERASHAIVA LINGAYATH) ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಮತ್ತು ಸಮಾಜದ ಸರ್ವಾಂಗೀಣ ಬೆಳವಣಿಗೆಗೆ ಸಮುದಾಯದ ಎಲ್ಲಾ 98 ಉಪ ಜಾತಿಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ತಕ್ಷಣವೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 3ಬಿಗೆ ಸೇರಿಸುವಂತೆ ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಜಡೇ ಮಠದ ಶ್ರೀ ಮಹಾಂತೇಶ ಸ್ವಾಮೀಜಿ, ಬಿಳಕಿ ಮಠದ ರಾಚೋಟೇಶ್ವರ ಶ್ರೀಗಳು, ತೊಗರ್ಸಿ ಮಠದ ಶ್ರೀಗಳು ಪಾಲ್ಗೊಂಡಿದ್ದರು.
ಸಮಾಜದ ಮುಖಂಡರಾದ ರುದ್ರಮುನಿ ಸಜ್ಜನ್, ಎನ್.ಜೆ. ರಾಜಶೇಖರ್, ಎಸ್.ಎಸ್. ಜ್ಯೋತಿಪ್ರಕಾಶ್, ಹೆಚ್.ಸಿ. ಯೋಗೀಶ್, ರಾಜಶೇಖರ್, ಅನಿತಾ ರವಿಶಂಕರ್, ಎಸ್.ಪಿ. ದಿನೇಶ್, ಆನಂದವಾಲಿ, ಮಹೇಶ್ ಮೂರ್ತಿ, ವೈ.ಹೆಚ್. ನಾಗರಾಜ್, ಟಿ.ಬಿ. ಜಗದೀಶ್, ಹೆಚ್.ಪಿ. ಗಿರೀಶ್, ಹೆಚ್.ಬಿ. ದಿನೇಶ್, ಮಹೇಶ್ ಮೂರ್ತಿ ಸಿ., ಬೆನಕಪ್ಪ, ಆನಂದಮೂತರ್ಿ, ರೇಣುಕಾ ನಾಗರಾಜ್, ಜಯಣ್ಣ, ರುದ್ರಮುನಿ, ವೀರಮ್ಮ, ಹರ್ಷ ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಭಾರಿ ಮಳೆ, ಯಾವ್ಯಾವ ಊರಲ್ಲಿ 100 ಮಿ.ಮೀಗಿಂತಲೂ ಹೆಚ್ಚು ಮಳೆಯಾಗಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.