ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020
ಲಂಡನ್’ನಿಂದ ಶಿವಮೊಗ್ಗಕ್ಕೆ ತರಿಸಲಾಗಿರುವ ಬಸವಣ್ಣನ ಪುತ್ಥಳಿಯನ್ನು ಕೂಡಲೇ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಹಾನಗರ ಪಾಲಿಕೆ ಮೇಯರ್’ಗೆ ಇವತ್ತು ಮನವಿ ಸಲ್ಲಿಸಲಾಯಿತು.
ಒಂದೂವರೆ ವರ್ಷದ ಹಿಂದೆ ಅನಿವಾಸಿ ಭಾರತೀಯ ಡಾ.ನೀರಜ್ ಪಟೇಲ್ ಅವರು, ಬಸವೇಶ್ವರ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿದರು. ಗಾಂಧಿ ಪಾರ್ಕ್ ಮುಂಭಾಗ, ಡಿವಿಎಸ್ ಕಾಲೇಜು ಸರ್ಕಲ್’ನಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೆ ನಿರ್ಧರಿಸಲಾಗಿತ್ತು. ಇದಕ್ಕಾಗಿ ಮಹಾನಗರ ಪಾಲಿಕೆ ವತಿಯಿಂದ 25 ಲಕ್ಷ ರೂ. ಮೀಸಲಿಡಲಾಗಿದೆ. ಆದರೆ ಈವರೆಗೂ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಸಾಧ್ಯವಾಗಿಲ್ಲ.
ಈ ವಿಳಂಬ ಡಾ.ನೀರಜ್ ಪಟೇಲ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗೆ ಅಗೌರವ ತರಲಿದೆ ಎಂದು ಮಹಾಸಭಾದ ಪ್ರಮುಖರು ಆರೋಪಿಸಿದರು. ಕೂಡಲೆ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ರುದ್ರಮುನಿ ಎನ್.ಸಜ್ಜನ್, ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]