ಶಿವಮೊಗ್ಗ ಲೈವ್.ಕಾಂ | SAGARA NEWS | 14 ನವೆಂಬರ್ 2021
ಸಾಗರ ನಗರದ ದೇವಸ್ಥಾನ ಒಂದರಲ್ಲಿ ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ. ಎಲ್ಲರನ್ನು ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿನೋಬನಗರದ ದೇವಸ್ಥಾನದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸೇವಿಸಿದ ಸುಮಾರು 20 ಮಂದಿ ಅಸ್ವಸ್ಥಗೊಂಡಿದ್ದಾರೆ.
ಶಾಸಕ ಹಾಲಪ್ಪ ಭೇಟಿ
ಅಸ್ವಸ್ಥರಾದವರನ್ನು ಕೂಡಲೆ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ವಿಚಾರ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗಳ ಆರೋಗ್ಯ ವಿಚಾರಿಸಿದರು.