ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 AUGUST 2023
BHADRAVATHI : ವಿಐಎಸ್ಎಲ್ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಕಾರ್ಖಾನೆಗೆ ಬಂತು ಬ್ಲೂಮ್
ಉಕ್ಕು ಪ್ರಾಧಿಕಾರದ ಬಿಲಾಯ್ ಘಟಕದಿಂದ ವಿಐಎಸ್ಎಲ್ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್ ರೈಲಿನ 19 ವ್ಯಾಗನ್ಗಳಲ್ಲಿ ಬ್ಲೂಮ್ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಾರ್ಮಿಕರು ಬ್ಲೂಮ್ ತುಂಬಿಕೊಂಡು ಬಂದಿದ್ದ ವ್ಯಾಗನ್ಗೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ – ‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್, ಮಳೆಗಾಲದಲ್ಲಿ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ
ವಿಐಎಸ್ಎಲ್ ಮುಚ್ಚುವ ಆದೇಶದ ವಿರುದ್ಧ ಕಳೆದ 8 ತಿಂಗಳಿಂದ ಗುತ್ತಿಗೆ ಕಾರ್ಮಿಕರು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸೇಲ್ ಆಡಳಿತ ಮಂಡಳಿ ಕಾರ್ಖಾನೆ ಪುನಾರಂಭದ ಮಾಹಿತಿ ನೀಡಿತ್ತು. ಈಗ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕಾರ್ಮಿಕರ ಸಮಸ್ಯೆ ಶಾಶ್ವತವಾಗಿ ಪರಿಹಾರ ಕಾಣದ ಹೊರತು ಹೋರಾಟ ನಿಲ್ಲಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ