ಶಿವಮೊಗ್ಗ ಲೈವ್.ಕಾಂ |BHADRAVATHI NEWS | 19 NOVEMBER 2020
ಮನೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ವಿಐಎಸ್ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಹಿ ಸಂಗ್ರಹ ನಡೆಯುತ್ತಿದೆ.
ಪತ್ರ ಬರೆಯಲು ಕಾರಣವೇನು?
ವಿಐಎಸ್ಎಲ್ ವಸತಿಗೃಹಗಳಲ್ಲಿ ಲೀಸ್ ಆಧಾರದಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರು ತಾವಿರುವ ಮನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರೆ ಬರೆಯತ್ತಿದ್ದಾರೆ.
ವಿಐಎಸ್ಎಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಹಾಗಾಗಿ ವಸತಿಗೃಹಗಳನ್ನು ಖಾಲಿ ಮಾಡಿಸಲು ಕಿರುಕುಳ ನೀಡಲಾಗುತ್ತಿದೆ.
2022ರೊಳಗೆ ಸರ್ವರಿಗೂ ಮನೆ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದ್ದರಿಂದ ಶಾಶ್ವತವಾಗಿ ಮನೆಗಳನ್ನು ಉಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗುತ್ತಿದೆ.
ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಪತ್ರ ಬರೆಯಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]