SHIVAMOGGA LIVE NEWS | 8 DECEMBER 2023
BHADRAVATHI: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಉಳಿಸಿಕೊಡುವಂತೆ ಒತ್ತಾಯಿಸಿ ಕಾರ್ಖಾನೆಯ ಕಾರ್ಮಿಕರ ನಿಯೋಗ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಭದ್ರಾವತಿ ಜೆಡಿಎಸ್ ಪಕ್ಷದ ಯುವ ಮುಖಂಡ ಎಂ.ಎ.ಅಜಿತ್ ನೇತೃತ್ವದ ನಿಯೋಗ ಕುಮಾರಸ್ವಾಮಿ ಅವರನ್ನು ಭೇಟಿಯಾಯಿತು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ವಿಲಿಂಗ್, ಇಬ್ಬರಿಗೆ ದಂಡ, ಬೈಕ್ ಕೊಟ್ಟ ತಪ್ಪಿಗೆ ಯಮಹಾ RX ಮಾಲೀನಿಗೂ ಫೈನ್
ಪ್ರಧಾನಿ ಜೊತೆ ಚರ್ಚೆಗೆ ಮನವಿ
ವಿಐಎಸ್ಎಲ್ ಕಾರ್ಖಾನೆ ((VISL)) ಉಳಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಚರ್ಚಿಸಬೇಕು ಎಂದು ನಿಯೋಗದ ಸದಸ್ಯರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ, ಈ ತಿಂಗಳ ಅಂತ್ಯದೊಳಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ತೆರಳುತ್ತಿದೇನೆ. ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಿಯೋಗದಲ್ಲಿ ಪ್ರಮುಖರಾದ ಮಧುಕುಮಾರ್, ರಮೇಶ್ ಹಾಗೂ ಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳು ಇದ್ದರು.