ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಏಪ್ರಿಲ್ 2021
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಹತ್ತು ಗಂಟೆ ಆಗುತ್ತಿದ್ದಂತೆ ಪೊಲೀಸರು ಫೀಲ್ಡಿಗಿಳಿದಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಹಾಲು, ತರಕಾರಿ, ಮಾಂಸದ ಅಂಗಡಿಗಳಲ್ಲಿ ಬೆಳಗ್ಗೆಯಿಂದ ವ್ಯಾಪಾರಕ್ಕೆ ಅವಕಾಶವಿತ್ತು. ಸರ್ಕಾರ ನಿಗದಿಪಡಿಸಿದ ಅವಧಿ ಮುಗಿಯುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದರು.
ಗಾಂಧಿ ಬಜಾರ್, ದುರ್ಗಿಗುಡಿ, ಜೈಲ್ ರೋಡ್ ಸೇರಿದಂತೆ ಪ್ರಮುಖ ವಹಿವಾಟು ಸ್ಥಳದಲ್ಲಿ ಪೊಲೀಸರು ಗಸ್ತು ತಿರುಗಿದರು. ಅಂಗಡಿಗಳ ಬಾಗಿಲು ಹಾಕಿಸಿದರು. ಅನಗತ್ಯವಾಗಿ ಓಡಾಡುತ್ತಿದ್ದವರನ್ನು ತಡೆದು ಪ್ರಶ್ನಿಸಿದರು.