ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟಂಬರ್ 2020
ಅವರು ರಾಜನಂತಿದ್ದರು. ರಾಜನಂತೆಯೇ ಹೋಗಿದ್ದಾರೆ. ಯಾರು ತಪ್ಪು ಮಾಹಿತಿಗೆ ಕಿವಿಗೊಡಬೇಡಿ. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಇದು ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅವರ ಮನವಿ.
ಅಪ್ಪಾಜಿಗೌಡ ಅವರಿಗೆ ಇನ್ನಷ್ಟು ಜನಸೇವೆ ಮಾಡಲು ಅವಕಾಶ ಕೊಡಬೇಕಿತ್ತು. ಆದರೆ ದೇವರು ಇಷ್ಟು ಬೇಗ ಆಯಸ್ಸು ಕಡಿಮೆ ಮಾಡಬಾರದಿತ್ತು ಎಂದು ಸುದ್ದಿಗಾರರೊಂದಿಗೆ ತಮ್ಮ ದುಃಖ ಹಂಚಿಕೊಂಡರು ಶಾರದಾ ಅಪ್ಪಾಜಿಗೌಡ. ಎಲ್ಲರು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಅಪ್ಪಾಜಿಗೌಡ ಅವರ ಮನೆ ಬಳಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದು, ಪಾರ್ಥೀವ ಶರೀರದ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]