SHIVAMOGGA LIVE NEWS | 17 OCTOBER 2023
RIPPONPETE : ಹೊಲ, ಗದ್ದೆಗಳಿಗೆ ನುಗ್ಗಿದ ಕಾಡಾನೆ ಬೆಳೆ ಹಾನಿ ಮಾಡಿದೆ. ಭತ್ತದ ಗದ್ದೆ, ಬಾಳೆ ತೋಟಕ್ಕೆ ನುಗ್ಗಿ ರೈತರಲ್ಲಿ ಆತಂಕ ಮೂಡಿಸಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವುದಾಗಿ ಭರವಸೆ ನೀಡಿದ್ದಾರೆ.
ರಿಪ್ಪನ್ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಭಾನುವಾರ ರಾತ್ರಿ ಕಾಡಾನೆಯೊಂದು ತನ್ನ ಮರಿಯೊಂದಿಗೆ ಹೊಲ, ಗದ್ದೆಗೆ ನುಗ್ಗಿದೆ ಎಂದು ಹೇಳಲಾಗುತ್ತಿದೆ. ಖೈರದಮನೆ ಶರತ್ ಅವರ ಭತ್ತದ ಗದ್ದೆ, ಗಾಳಿಬೈಲು ಅಯೂಬ್ ಅವರ ಬಾಳೆ ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದೆ. ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್ಒ ಶಿವಶಂಕರ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ- ಸದ್ಯದಲ್ಲೆ ವಾಟ್ಸಪ್ನಲ್ಲಿ ‘ಸೀಕ್ರೆಟ್ ಕೋಡ್’ ಚಾಟಿಂಗ್, ಏನಿದು? ಹೇಗೆ ಕೆಲಸ ಮಾಡುತ್ತೆ?
ಆನೆಯ ಚಲನವಲನದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಕಾಡಿಗೆ ಹಿಮ್ಮೆಟ್ಟಿಸುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ. ಇನ್ನು, ರೈತರು ಆನೆ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.