SHIVAMOGGA LIVE NEWS | 25 ಮಾರ್ಚ್ 2022
ಅಡುಗೆ ಮಾಡುವಾಗ ವಿಷ ಜಂತು ಕಡಿದು ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ರಾಮಚಂದ್ರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮುಂಡೇಶ್ವರಿ ಬೆಟ್ಟದ ಬಳಿ ಘಟನೆ ಸಂಭವಿಸಿದೆ.
ಸೌಮ್ಯ (24) ಮೃತ ಮಹಿಳೆ. ಮಧ್ಯಾಹ್ನ ಅಡುಗೆ ಮಾಡುವಾಗ ವಿಷ ಜಂತುವೊಂದು ಕಾಲಿಗೆ ಕುಟುಕಿದೆ. ಕೆಲ ಹೊತ್ತಿನ ಬಳಿಕ ನೋವು ಕಾಣಿಸಿಕೊಂಡು, ಕಾಲು ಊದಿಕೊಂಡಿದೆ. ಕೂಡಲೆ ಸೌಮ್ಯ ಅವರನ್ನು ಹೊಸನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾರ್ಗ ಮಧ್ಯೆ ಸೌಮ್ಯ ಮೃತಪಟ್ಟಿದ್ದಾರೆ.
ನಾಲ್ಕು ವರ್ಷದ ಹಿಂದೆ ಸೌಮ್ಯ ಅವರು ನಾಗರಾಜು ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಮೂರು ವರ್ಷದ ಮಗನಿದ್ದಾನೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200