ಶಿವಮೊಗ್ಗ ಲೈವ್.ಕಾಂ | AGUMBE NEWS | 25 MAY 2021
ಮದುವೆ ವಾರ್ಷಿಕೋತ್ಸವದ ಮುನ್ನಾ ದಿನವೇ ಗೃಹಿಣಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ಮತ್ತು ಅತ್ತೆಯೆ ಹತ್ಯೆ ಮಾಡಿ, ನೇಣು ಬಿಗಿದಿದ್ದಾರೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ.
ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮದ ಬಿಳಿಗಿರಿಯಲ್ಲಿ ಘಟನೆ ಸಂಭವಿಸಿದೆ. ಜ್ಯೋತಿ (25) ಮೃತಳು. ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಜ್ಯೋತಿ ಪೋಷಕರು ದೂರು ನೀಡಿದ್ದು, ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ.
2016ರ ಮೇ 24ರಂದು ಬಿಳಿಗಿರಿಯ ದಯಾನಂದ ಶೆಟ್ಟಿ ಎಂಬುವವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಆ ಬಳಿಕ ವರದಕ್ಷಿಣೆ ಕಿರುಕುಳ ಆರಂಭವಾಗಿತ್ತು. ಇದೆ ಕಾರಣಕ್ಕೆ ಮೇ 23ರಂದು ಮಗಳನ್ನು ಹೊಡೆದು ಕೊಲೆ ಮಾಡಲಾಗಿದೆ ಎಂದು ಜ್ಯೋತಿ ಪೋಷಕರು ಆರೋಪಿಸಿ, ದೂರು ನೀಡಿದ್ದಾರೆ.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]