ಶಿವಮೊಗ್ಗ ಲೈವ್.ಕಾಂ | SAGARA NEWS | 29 ಮೇ 2020
ಮಾರಕಾಸ್ತ್ರಗಳಿಂದ ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ.
ಸಾಜೀಲ್ (೨೪) ಮೃತ ಯುವಕ. ಮಾರಕಾಸ್ತ್ರಗಳಿಂದ ಸಾಜೀಲ್ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಕೂಡಲೆ ಸಾಜೀಲ್ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಹೇಗಾಯ್ತು ಘಟನೆ?
ಸಾಗರದ ಅರಳಿಕೊಪ್ಪ ಗ್ರಾಮದ ಲೇಔಟ್ ಹಿಂಭಾಗ ಸಾಜೀಲ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾಜೀಲ್ನನ್ನು ಕೂಡಲೇ ಅಸ್ಪತ್ರೆಗೆ ಸಾಗಿಸಲಾಗಿದೆ.
ಹಳೆ ದ್ವೇಷದ ಶಂಕೆ
ಸಾಜೀಲ್ ಸಾಗರದಲ್ಲಿ ಹಣ್ಣು, ತರಕಾರಿ ವ್ಯಪಾರ ನಡೆಸುತ್ತಿದ್ದ. ಈತನ ಮೇಲೆ ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಹಳ್ಳೆ ದ್ವೇಷದಿಂದ ಹಲ್ಲೆ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]