ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜೂನ್ 2020
ಭಾರತ ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶಿವಮೊಗ್ಗದ ಯುವ ಕಾಂಗ್ರೆಸ್ ವತಿಯಿಂದ ನಮನ ಸಲ್ಲಿಸಲಾಯಿತು.
ಶಿವಮೊಗ್ಗದ ಸೈನಿಕ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ವತಿಯಂದ, ಸೈನಿಕರ ಪ್ರತಿಮೆಗೆ ಹೂವಿನ ಹಾರ ಹಾಕಿ, ಮೇಣದ ಬತ್ತಿ ಹಚ್ಚಲಾಯಿತು. ಕಾರ್ಯಕರ್ತರು ಭಾರತೀಯ ಸೇನೆ ಪರವಾಗಿ ಘೋಷಣೆ ಕೂಗಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಶಿವಮೊಗ್ಗ ನಗರಾಧ್ಯಕ್ಷ ಎಚ್ ಪಿ ಗಿರೀಶ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೀಶ್, ಕಾರ್ಪೊರೇಟರ್ ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಪ್ರಮುಖರಾದ ದೇವೇಂದ್ರಪ್ಪ, ಕಿರಣ್, ರಂಜಿತ್, ಶರವಣ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]