SHIVAMOGGA LIVE NEWS | ACCIDENT| 29 ಏಪ್ರಿಲ್ 2022
ಆಯನೂರು ಸಮೀಪ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿ. ಆಯನೂರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.
ಆಕಾಶ್ ಬೈಕಿನಲ್ಲಿ ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ. ಕೋಳಿ ಸಾಗಣೆಯ ಪಿಕಪ್ ವಾಹನವು ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ವೀರಗಾರನ ಬೈರನಕೊಪ್ಪದ ಬಳಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಆಕಾಶ್ ತಲೆ, ಕಾಲು ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ. ಆತ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಬೈಕ್ ಸವಾರನ ಪ್ರಾಣಕ್ಕೆ ಕುತ್ತು ತಂದ ಟಿಪ್ಪರ್ ಲಾರಿ