ಶಿವಮೊಗ್ಗ ಲೈವ್.ಕಾಂ | TALAGUPPA NEWS | 28 JUNE 2021
ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ತಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಯುವಕ ಸಿಲುಕಿದ್ದಾನೆ.
ಹೇಗಾಯ್ತು ಘಟನೆ?
ಸಿದ್ದಾಪುರ ತಾಲೂಕಿನ ನವೀನ್ (18) ರೈಲಿಗೆ ಸಿಲುಕಿದ ಯುವಕ.
ಪ್ಲಾಟ್ಫಾರಂ ಜಾರುತ್ತಿದ್ದರಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಪ್ಲಾಟ್ಫಾರಂನಿಂದ ಜಾರಿದ ನವೀನ್ ರೈಲಿನ ಕೆಳಗೆ ಬಿದ್ದಿದ್ದಾನೆ. ಈ ವೇಳೆ ರೈಲು ಚಲಿಸಿದ್ದರಿಂದ ನವೀನ್ ಕಾಲು ಮತ್ತು ಕೈಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.