SHIVAMOGGA LIVE | 2 JUNE 2023
HOLEHONNURU : ಗ್ರಾಮಾಂತರ ಪ್ರದೇಶದಲ್ಲಿ ಅಪರಾಧ ತಡೆಗೆ ಪೊಲೀಸ್ ಇಲಾಖೆ ವಿಭಿನ್ನ ಹೆಜ್ಜೆ ಇಟ್ಟಿದೆ. ಪ್ರತಿ ಗ್ರಾಮಕ್ಕೆ ಬೀಟ್ (Beat) ಸಿಬ್ಬಂದಿ ನೇಮಿಸಲಾಗುತ್ತದೆ. ಗ್ರಾಮದ ಯುವಕರು ಪೊಲೀಸರೊಂದಿಗೆ ಬೀಟ್ ನಡೆಸಬಹುದಾಗಿದೆ.
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಯಡೇಹಳ್ಳಿ ಗ್ರಾಮದ ಅಶೋಕ ನಗರದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜನ ಸಂಪರ್ಕ ಸಭೆ ನಡಸಿದರು. ಈ ವೇಳೆ ಅವರು ಐದು ಪ್ರಮುಖ ಸೂಚನೆ ನೀಡಿದ್ದಾರೆ.
ಸೂಚನೆ 1 – ಪ್ರತೀ ಗ್ರಾಮಗಳಿಗೂ ಬೀಟ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಆಯಾ ಸಬ್ಬಂದಿ ನಿರಂತರವಾಗಿ ತಮ್ಮ ಗ್ರಾಮಕ್ಕೆ ಭೇಟಿ ನೀಡಲಿದ್ದು, ಯಾವಾಗಲೂ ಜನರ ಸಂಪರ್ಕದಲ್ಲಿರುತ್ತಾರೆ. ಅದೇ ರೀತಿ ಜನರು ಕೂಡ ಗ್ರಾಮದ ಬೀಟ್ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿ ಇರಬೇಕು.
ಸೂಚನೆ 2 – ಗ್ರಾಮದಲ್ಲಿ ಅಕ್ರಮ ಚಟುವಟಿಕೆ ಕಂಡಲ್ಲಿ ಕೂಡಲೇ ಬೀಟ್ ಸಿಬ್ಬಂದಿ, ಪಿಎಸ್ಐ, ಠಾಣಾಧಿಕಾರಿಗೆ ಮಾಹಿತಿ ನೀಡಬೇಕು.
ಸೂಚನೆ 3 – ಗ್ರಾಮದಲ್ಲಿರುವ ಯುವಕರನ್ನು ಗುರುತಿಸಿ, 20 ರಿಂದ 30 ಯುವಕರ ಪಡೆ ರಚಿಸಿ, ಬೀಟ್ (Beat) ಸಿಬ್ಬಂದಿಯೊಂದಿಗೆ ಗಸ್ತು ಮಾಡಬೇಕು. ಯಾವದೇ ಅಕ್ರಮ ಚಟುವಟಿ ಕಂಡು ಬಂದಲ್ಲಿ ಅಥವಾ ಯಾವುದೇ ಮಾಹಿತಿ ಇದ್ದಲ್ಲಿ ಕೂಡಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್
ಸೂಚನೆ 4 – ಯಾವುದೇ ಸಮಾಜ ಘಾತುಕ ಅಥವಾ ಅಕ್ರಮ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು.
ಸೂಚನೆ 5 – ಯಾವುದೇ ತುರ್ತು ಸಂದರ್ಭದಲ್ಲಿ ERSS – 112 ಸಹಾಯವಾಣಿಗೆ ಕರೆಮಾಡಿ ಪೊಲೀಸ್ ಸಹಾಯ ಪಡೆದುಕೊಳ್ಳಬಹುದು.
ಹೊಳೆಹೊನ್ನೂರು ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮೀಪತಿ, ಯಡೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ