SHIVAMOGGA LIVE NEWS | 12 SEPTEMBER 2023
THIRTHAHALLI : ಭೀಮನಕಟ್ಟೆ ಬಳಿ ತುಂಗಾ ನದಿಯಲ್ಲಿ (River) ಈಜಲು ತೆರಳಿ ನೀರು ಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ.
ಬೆಂಗಳೂರಿನ ಮಾಗಡಿಯ ಯುವಕ ಗೌತಮ್ (28) ಮತ್ತು ಸುಜಯ್ (26) ಭಾನುವಾರ ತುಂಗಾ ನದಿಯಲ್ಲಿ ಮುಳುಗಿದ್ದರು. ಸೋಮವಾರ ಬೆಳಗ್ಗೆ ಗೌತಮ್ ಮೃತದೇಹ ಸಿಕ್ಕಿತ್ತು. ಅದನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿತ್ತು. ಸುಜಯ್ಗಾಗಿ ಶೋಧ ಕಾರ್ಯ ನಡೆಸಲಾಗತ್ತು. ಸುಜಯ್ ಮೃತದೇಹವು ಪತ್ತೆಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ